September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಎ.12 ರಂದು ಹಳ್ಳಿ ಸಂತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಉದ್ಘಾಟಿಸಿದರು.

ಹಳ್ಳಿ ಸಂತೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಮಾಡಿದ ವಸ್ತುಗಳು ಹಾಗೂ ಸ್ಥಳೀಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದೊರೆಯುವ ತರಕಾರಿ ಸೊಪ್ಪುಗಳ ತಿಂಡಿ ತಿನಿಸುಗಳ ಮಾರಾಟವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ಒಂದು ವ್ಯವಹಾರವನ್ನು ನಡೆಸಲು ಬೇಕಾಗುವ ಉದ್ಯಮಶೀಲತ್ವವನ್ನು ಬೆಳೆಸುವ ದೃಷ್ಟಿಯಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ನಿಕಟ ಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಟಿ.ಕೆ., ಹಾಗೂ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಇವರು ಸ್ವಾಗತಿಸಿ ಪ್ರೊಫೆಸರ್ ಸುರೇಶ್ ವಿ ವಂದಿಸಿದರು.

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya
error: Content is protected !!