July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಎ.12 ರಂದು ಹಳ್ಳಿ ಸಂತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಉದ್ಘಾಟಿಸಿದರು.

ಹಳ್ಳಿ ಸಂತೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಮಾಡಿದ ವಸ್ತುಗಳು ಹಾಗೂ ಸ್ಥಳೀಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದೊರೆಯುವ ತರಕಾರಿ ಸೊಪ್ಪುಗಳ ತಿಂಡಿ ತಿನಿಸುಗಳ ಮಾರಾಟವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ಒಂದು ವ್ಯವಹಾರವನ್ನು ನಡೆಸಲು ಬೇಕಾಗುವ ಉದ್ಯಮಶೀಲತ್ವವನ್ನು ಬೆಳೆಸುವ ದೃಷ್ಟಿಯಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ನಿಕಟ ಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಟಿ.ಕೆ., ಹಾಗೂ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಇವರು ಸ್ವಾಗತಿಸಿ ಪ್ರೊಫೆಸರ್ ಸುರೇಶ್ ವಿ ವಂದಿಸಿದರು.

Related posts

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!