April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

ಬಳಂಜ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಅನುಪ್ರಿಯಾ ಬಳಂಜರವರು 594ಅಂಕಗಳೊಂದಿಗೆ ರಾಜ್ಯಕ್ಕೆ 5 ನೇ ಸ್ಥಾನದೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನಿಯಾದ ಅವರನ್ನು ಅವರ ನಿವಾಸದಲ್ಲಿ ಎ.14 ರಂದು ಸನ್ಮಾನಿಸಲಾಯಿತು.

ಬಳಂಜ ಶಿಕ್ಷಣ ಟ್ರಸ್ಟ್,ಬಳಂಜ ಶಾಲಾ ಅಮೃತಾ ಮಹೋತ್ಸವ ಸಮಿತಿ, ಶಾಲಾಭಿವೃದ್ದಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ,ಶ್ರೀ ಉಮಾಮಹೇಶ್ವರ ಯುವಕ ಮಂಡಲ, ಜ್ಯೋತಿ ಮಹಿಳಾ ಮಂಡಲ ಹಾಗೂ ವಿದ್ಯಾಭಿಮಾನಿಗಳ ಪರವಾಗಿ ಕು.ಅನುಪ್ರಿಯಾ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಳಂಜ ಪ್ರೌಢ ಶಾಲಾಭಿವೃದ್ದಿ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ತಾ.ಪಂ ಮಾಜಿ ಸದಸ್ಯ ಹೆಚ್ ಧರ್ಣಪ್ಪ ಪೂಜಾರಿ,ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ರತ್ನರಾಜ್ ಜೈನ್,ಸಂತೋಷ್ ಕುಮಾರ್ ಕಾಪಿನಡ್ಕ, ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ, ಪ್ರವೀಣ್ ಕುಮಾರ್ ಹೆಚ್‌ ಎಸ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ದಿನೇಶ್ ಪೂಜಾರಿ ಅಂತರ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅನುಪ್ರಿಯಾರವರ ಹೆತ್ತವರಾದ ಬಳಂಜ ಕಟ್ಟದಬೈಲು ಚಂದ್ರಶೇಖರ್ ಪಿ.ಕೆ ಮತ್ತು ಪೂರ್ಣಿಮಾ ದಂಪತಿ ಮಗಳ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

Related posts

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!