25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!