April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

ಕೊಯ್ಯೂರು: ಇಲ್ಲಿನ ಬಜಿಲ ಇಲ್ಲಿನ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದ ಈ ವರ್ಷದ ಪುರುಷ ಪೂಜೆ ಕಾರ್ಯಕ್ರಮ ಮೇಗಿನ ಬಜಿಲ ಲಕ್ಷ್ಮಣ ಗೌಡರ ಮನೆಯಲ್ಲಿ ಏ. 14ರಂದು ನಡೆಯಿತು.

ಈ ಸಂದರ್ಭ ಆಯೋಜಿಸಿದ್ದ 4ನೇ ವರ್ಷದ ಸನ್ಮಾನ ಸಭಾ ಕಾರ್ಯಕ್ರಮದಲ್ಲಿ ಪುರುಷ ಕುಣಿತದ ಹಿರಿಯ ಕಲಾವಿದರಾದ ಮೋನಪ್ಪ ಗೌಡ ಬಜಿಲ, ವೆಂಕಪ್ಪ ಗೌಡ ಬಜಿಲ, ಬೂಚ ಗೌಡ ಬಜಿಲ, ನೀಲಪ್ಪ ಗೌಡ ನೇಲ್ಯಲ್ಕೆ, ಧರ್ಣಪ್ಪ ಗೌಡ ಬೀಜದಡಿ, ಸಾಂತಪ್ಪ ಮಲೆಕುಡಿಯ ಸಾದೂರು ಮೊದಲಾದವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ನೀಲಪ್ಪ ಗೌಡ ನೇಲ್ಯಲ್ಕೆ ಮಾತನಾಡಿ ಸಂತೋಷ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಗಿನ ಬಜಿಲ ಲಕ್ಷ್ಮಣ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕುಮಾರ್ ಅಗ್ರಸಾಲೆ ಭಾಗವಹಿಸಿದ್ದರು. ಅವರು ಪುರುಷ ಕುಣಿತದ ವಿಶಿಷ್ಟತೆ ಬಗ್ಗೆ ಮಾತನಾಡಿ ಇದೊಂದು ಕಾರ್ಣಿಕದ ಕಲೆ; ಇದನ್ನು ಉಳಿಸಲು ನಾವೆಲ್ಲ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಅಶೋಕ್ ಕುಮಾರ್ ಅವರನ್ನು ಪುರುಷರ ಬಳಗದಿಂದ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಲಿಂಗಪ್ಪ ಗೌಡ ಮೇಗಿನ ಬಜಿಲ, ತಿಮ್ಮಯ್ಯ ಗೌಡ ಕೋಂಗುಜೆ, ವೆಂಕಪ್ಪ ಗೌಡ ಕೋರ್ಯಾರು ಉಪಸ್ಥಿತರಿದ್ದರು.
ಮೂರು ದಿನಗಳ ತಿರುಗಾಟದ ವೇಳೆ ಕಿರೀಟ ಧರಿಸಿದ ಮಕ್ಕಳನ್ನು ಪುಸ್ತಕ ಮತ್ತು ಕಂಪಾಸ್ ನೀಡಿ ಪ್ರೋತ್ಸಾಹಿಸಲಾಯಿತು.
ಗಿರಿಧರ ಗೌಡ ಕಜೆಕೋಡಿ ಸ್ವಾಗತಿಸಿದರು.
ದೀಪಿಕಾ ದಿವ ಕೊಕ್ಕಡ ಪ್ರಾರ್ಥನೆ ಮಾಡಿದರು. ದಿವ ಕೊಕ್ಕಡ ನಿರೂಪಿಸಿ, ಮೋನಪ್ಪ ಸಾಲಿಯಾನ್ ವಂದಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya
error: Content is protected !!