July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!