23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!