ತಾಲೂಕು ಸುದ್ದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಎ.15ರಂದು ಸ್ಥಳಾಂತರ ಗೊಂಡಿತು.
ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ.ವಿ. ಅವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ಶ್ರೀಮತಿ ರತ್ನಾವತಿ, ಪ್ರಶಾಂತ ಕುಮಾರ್, ಹರಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್‌, ಮುಖ್ಯ ಪಶು ವೈದ್ಯಾಧಿಕಾರಿ ಡಾ/ ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿ ಗಳಾದ ಶ್ರೀಮತಿ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣ ರವರು ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್ ರವರು ವಂದಿಸಿದರು.
ಸೌಲಭ್ಯಗಳು:
ಸಹಕಾರಿ ಸಂಘದಲ್ಲಿ ಇ- ಸ್ಟಾಂಪಿಂಗ್, ಕಲರ್ ಝರಾಕ್ಸ್, ಝರಾಕ್ಸ್, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ ಎಂದು ಅಧ್ಯಕ್ಷ .ಕೆ. ಜಯಕೀರ್ತಿ ಜೈನ್ ರವರು ತಿಳಿಸಿದರು.

Related posts

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
error: Content is protected !!