25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಎ.15ರಂದು ಸ್ಥಳಾಂತರ ಗೊಂಡಿತು.
ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ.ವಿ. ಅವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ಶ್ರೀಮತಿ ರತ್ನಾವತಿ, ಪ್ರಶಾಂತ ಕುಮಾರ್, ಹರಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್‌, ಮುಖ್ಯ ಪಶು ವೈದ್ಯಾಧಿಕಾರಿ ಡಾ/ ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿ ಗಳಾದ ಶ್ರೀಮತಿ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣ ರವರು ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್ ರವರು ವಂದಿಸಿದರು.
ಸೌಲಭ್ಯಗಳು:
ಸಹಕಾರಿ ಸಂಘದಲ್ಲಿ ಇ- ಸ್ಟಾಂಪಿಂಗ್, ಕಲರ್ ಝರಾಕ್ಸ್, ಝರಾಕ್ಸ್, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ ಎಂದು ಅಧ್ಯಕ್ಷ .ಕೆ. ಜಯಕೀರ್ತಿ ಜೈನ್ ರವರು ತಿಳಿಸಿದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!