23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ: ಅಸ್ಪೃಶ್ಯತೆಯ ಬೇಗೆಯಲ್ಲಿ ಬೆಂದು, ತುಳಿತಕ್ಕೆ ಒಳಪಟ್ಟು ತರಗತಿಯ ಮೂಲೆಯಲ್ಲಿ ಕುಳಿತು ಕಲಿತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಇಂದು ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ಇವರು ಹೇಳಿದರು.


ಸಂವಿಧಾನ ಮತ್ತು ಅಂಬೇಡ್ಕರ್ ಒಂದೇ ನಾಣ್ಯದ ಎರಡು ಮುಖ. ಶಿಕ್ಷಣ-ಸಂಘಟನೆ ಸಂಘರ್ಷದಿಂದ ಅಂಬೇಡ್ಕರ್ ಬೆಳೆದವರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಭ್ರಾತೃತ್ವ ಸಂವಿಧಾನದ ನಾಲ್ಕು ಸ್ತಂಭಗಳು. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಅದರೆ ಮನುಷ್ಯರ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಬೇಕು. ಇದು ಅಂಬೇಡ್ಕರ್‌ರವರ ಆಶಯ. ಭಾರತಕ್ಕೆ ಸ್ಫೂರ್ತಿ ಆಗಿದ್ದ ಅಂಬೇಡ್ಕರ್‌ರವರು ‘ತುಳಿದು ಬದುಕಬೇಡಿ, ತಿಳಿದು ಬದುಕಿ’ ಎಂಬುದನ್ನು ಜಗತ್ತಿಗೆ ಸಾರಿದವರು. ಏಕೆಂದರೆ ಒಂದು ಕಾಲದಲ್ಲಿ ತುಳಿತಕ್ಕೆ ಒಳಪಟ್ಟ ಇವರನ್ನು ಇಂದು ಇಡೀ ಜಗತ್ತೇ ತಿಳಿಯಲು ಆರಂಭಿಸಿದೆ ಎಂದು ಹೇಳಿದರು.


ತಮ್ಮ ಗುರುಗಳ ಹೆಸರಿಟ್ಟುಕೊಂಡ ಡಾ. ಬಿ. ಆರ್. ಅಂಬೇಡ್ಕರ್‌ರವರು ಪ್ರತೀ ಶಿಕ್ಷಕ ಹಾಗೂ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಪ್ರಗತಿಗೆ ವಿದ್ಯೆಯೇ ಮೂಲ ಎಂಬುವುದು ಇವರ ಪ್ರಮುಖ ತತ್ವ. ಭಾರತದ ಮಹಾನ್ ವ್ಯಕ್ತಿಗಳಲ್ಲಿ ಇವರೂ ಕೂಡಾ ಒಬ್ಬರಾಗಿದ್ದಾರೆ. ಭಾರತವು ಕೇವಲ ವಿದೇಶಿಗಳಿಂದ ಸ್ವಾತಂತ್ರ್ಯಗೊಂಡರೆ ಸಾಲದು, ಧಾರ್ಮಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿಯೂ ಸ್ವತಂತ್ರಗೊಂಡಾಗ ಮಾತ್ರ ಸದೃಢ ರಾಷ್ಟ್ರ ರೂಪುಗೊಳ್ಳುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಇವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ತಿರುಮಲೇಶ ರಾವ್ ಎನ್ ಕೆ ಹಾಗೂ ಶ್ರೀಮತಿ ಚೈತ್ರಾರವರು ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಮಹಾಲಕ್ಷ್ಮಿ ಸ್ವಾಗತಿಸಿ, ಸ್ವಾತಿ ವಂದಿಸಿ, ವಿಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya
error: Content is protected !!