July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ: ಅಸ್ಪೃಶ್ಯತೆಯ ಬೇಗೆಯಲ್ಲಿ ಬೆಂದು, ತುಳಿತಕ್ಕೆ ಒಳಪಟ್ಟು ತರಗತಿಯ ಮೂಲೆಯಲ್ಲಿ ಕುಳಿತು ಕಲಿತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಇಂದು ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ಇವರು ಹೇಳಿದರು.


ಸಂವಿಧಾನ ಮತ್ತು ಅಂಬೇಡ್ಕರ್ ಒಂದೇ ನಾಣ್ಯದ ಎರಡು ಮುಖ. ಶಿಕ್ಷಣ-ಸಂಘಟನೆ ಸಂಘರ್ಷದಿಂದ ಅಂಬೇಡ್ಕರ್ ಬೆಳೆದವರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಭ್ರಾತೃತ್ವ ಸಂವಿಧಾನದ ನಾಲ್ಕು ಸ್ತಂಭಗಳು. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಅದರೆ ಮನುಷ್ಯರ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಬೇಕು. ಇದು ಅಂಬೇಡ್ಕರ್‌ರವರ ಆಶಯ. ಭಾರತಕ್ಕೆ ಸ್ಫೂರ್ತಿ ಆಗಿದ್ದ ಅಂಬೇಡ್ಕರ್‌ರವರು ‘ತುಳಿದು ಬದುಕಬೇಡಿ, ತಿಳಿದು ಬದುಕಿ’ ಎಂಬುದನ್ನು ಜಗತ್ತಿಗೆ ಸಾರಿದವರು. ಏಕೆಂದರೆ ಒಂದು ಕಾಲದಲ್ಲಿ ತುಳಿತಕ್ಕೆ ಒಳಪಟ್ಟ ಇವರನ್ನು ಇಂದು ಇಡೀ ಜಗತ್ತೇ ತಿಳಿಯಲು ಆರಂಭಿಸಿದೆ ಎಂದು ಹೇಳಿದರು.


ತಮ್ಮ ಗುರುಗಳ ಹೆಸರಿಟ್ಟುಕೊಂಡ ಡಾ. ಬಿ. ಆರ್. ಅಂಬೇಡ್ಕರ್‌ರವರು ಪ್ರತೀ ಶಿಕ್ಷಕ ಹಾಗೂ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಪ್ರಗತಿಗೆ ವಿದ್ಯೆಯೇ ಮೂಲ ಎಂಬುವುದು ಇವರ ಪ್ರಮುಖ ತತ್ವ. ಭಾರತದ ಮಹಾನ್ ವ್ಯಕ್ತಿಗಳಲ್ಲಿ ಇವರೂ ಕೂಡಾ ಒಬ್ಬರಾಗಿದ್ದಾರೆ. ಭಾರತವು ಕೇವಲ ವಿದೇಶಿಗಳಿಂದ ಸ್ವಾತಂತ್ರ್ಯಗೊಂಡರೆ ಸಾಲದು, ಧಾರ್ಮಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿಯೂ ಸ್ವತಂತ್ರಗೊಂಡಾಗ ಮಾತ್ರ ಸದೃಢ ರಾಷ್ಟ್ರ ರೂಪುಗೊಳ್ಳುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಇವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ತಿರುಮಲೇಶ ರಾವ್ ಎನ್ ಕೆ ಹಾಗೂ ಶ್ರೀಮತಿ ಚೈತ್ರಾರವರು ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಮಹಾಲಕ್ಷ್ಮಿ ಸ್ವಾಗತಿಸಿ, ಸ್ವಾತಿ ವಂದಿಸಿ, ವಿಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya
error: Content is protected !!