25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya
error: Content is protected !!