25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!