37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya
error: Content is protected !!