April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya
error: Content is protected !!