July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!