27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!