27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಎ.15ರಂದು ಸ್ಥಳಾಂತರ ಗೊಂಡಿತು.
ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ.ವಿ. ಅವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ಶ್ರೀಮತಿ ರತ್ನಾವತಿ, ಪ್ರಶಾಂತ ಕುಮಾರ್, ಹರಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್‌, ಮುಖ್ಯ ಪಶು ವೈದ್ಯಾಧಿಕಾರಿ ಡಾ/ ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿ ಗಳಾದ ಶ್ರೀಮತಿ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣ ರವರು ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್ ರವರು ವಂದಿಸಿದರು.
ಸೌಲಭ್ಯಗಳು:
ಸಹಕಾರಿ ಸಂಘದಲ್ಲಿ ಇ- ಸ್ಟಾಂಪಿಂಗ್, ಕಲರ್ ಝರಾಕ್ಸ್, ಝರಾಕ್ಸ್, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ ಎಂದು ಅಧ್ಯಕ್ಷ .ಕೆ. ಜಯಕೀರ್ತಿ ಜೈನ್ ರವರು ತಿಳಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya
error: Content is protected !!