25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಎ.15ರಂದು ಸ್ಥಳಾಂತರ ಗೊಂಡಿತು.
ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ.ವಿ. ಅವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ಶ್ರೀಮತಿ ರತ್ನಾವತಿ, ಪ್ರಶಾಂತ ಕುಮಾರ್, ಹರಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್‌, ಮುಖ್ಯ ಪಶು ವೈದ್ಯಾಧಿಕಾರಿ ಡಾ/ ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿ ಗಳಾದ ಶ್ರೀಮತಿ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣ ರವರು ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್ ರವರು ವಂದಿಸಿದರು.
ಸೌಲಭ್ಯಗಳು:
ಸಹಕಾರಿ ಸಂಘದಲ್ಲಿ ಇ- ಸ್ಟಾಂಪಿಂಗ್, ಕಲರ್ ಝರಾಕ್ಸ್, ಝರಾಕ್ಸ್, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ ಎಂದು ಅಧ್ಯಕ್ಷ .ಕೆ. ಜಯಕೀರ್ತಿ ಜೈನ್ ರವರು ತಿಳಿಸಿದರು.

Related posts

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!