ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!