30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya
error: Content is protected !!