September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

ಕೊಯ್ಯೂರು: ಇಲ್ಲಿನ ಬಜಿಲ ಇಲ್ಲಿನ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದ ಈ ವರ್ಷದ ಪುರುಷ ಪೂಜೆ ಕಾರ್ಯಕ್ರಮ ಮೇಗಿನ ಬಜಿಲ ಲಕ್ಷ್ಮಣ ಗೌಡರ ಮನೆಯಲ್ಲಿ ಏ. 14ರಂದು ನಡೆಯಿತು.

ಈ ಸಂದರ್ಭ ಆಯೋಜಿಸಿದ್ದ 4ನೇ ವರ್ಷದ ಸನ್ಮಾನ ಸಭಾ ಕಾರ್ಯಕ್ರಮದಲ್ಲಿ ಪುರುಷ ಕುಣಿತದ ಹಿರಿಯ ಕಲಾವಿದರಾದ ಮೋನಪ್ಪ ಗೌಡ ಬಜಿಲ, ವೆಂಕಪ್ಪ ಗೌಡ ಬಜಿಲ, ಬೂಚ ಗೌಡ ಬಜಿಲ, ನೀಲಪ್ಪ ಗೌಡ ನೇಲ್ಯಲ್ಕೆ, ಧರ್ಣಪ್ಪ ಗೌಡ ಬೀಜದಡಿ, ಸಾಂತಪ್ಪ ಮಲೆಕುಡಿಯ ಸಾದೂರು ಮೊದಲಾದವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ನೀಲಪ್ಪ ಗೌಡ ನೇಲ್ಯಲ್ಕೆ ಮಾತನಾಡಿ ಸಂತೋಷ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಗಿನ ಬಜಿಲ ಲಕ್ಷ್ಮಣ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕುಮಾರ್ ಅಗ್ರಸಾಲೆ ಭಾಗವಹಿಸಿದ್ದರು. ಅವರು ಪುರುಷ ಕುಣಿತದ ವಿಶಿಷ್ಟತೆ ಬಗ್ಗೆ ಮಾತನಾಡಿ ಇದೊಂದು ಕಾರ್ಣಿಕದ ಕಲೆ; ಇದನ್ನು ಉಳಿಸಲು ನಾವೆಲ್ಲ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಅಶೋಕ್ ಕುಮಾರ್ ಅವರನ್ನು ಪುರುಷರ ಬಳಗದಿಂದ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಲಿಂಗಪ್ಪ ಗೌಡ ಮೇಗಿನ ಬಜಿಲ, ತಿಮ್ಮಯ್ಯ ಗೌಡ ಕೋಂಗುಜೆ, ವೆಂಕಪ್ಪ ಗೌಡ ಕೋರ್ಯಾರು ಉಪಸ್ಥಿತರಿದ್ದರು.
ಮೂರು ದಿನಗಳ ತಿರುಗಾಟದ ವೇಳೆ ಕಿರೀಟ ಧರಿಸಿದ ಮಕ್ಕಳನ್ನು ಪುಸ್ತಕ ಮತ್ತು ಕಂಪಾಸ್ ನೀಡಿ ಪ್ರೋತ್ಸಾಹಿಸಲಾಯಿತು.
ಗಿರಿಧರ ಗೌಡ ಕಜೆಕೋಡಿ ಸ್ವಾಗತಿಸಿದರು.
ದೀಪಿಕಾ ದಿವ ಕೊಕ್ಕಡ ಪ್ರಾರ್ಥನೆ ಮಾಡಿದರು. ದಿವ ಕೊಕ್ಕಡ ನಿರೂಪಿಸಿ, ಮೋನಪ್ಪ ಸಾಲಿಯಾನ್ ವಂದಿಸಿದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!