23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya
error: Content is protected !!