25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
error: Content is protected !!