July 23, 2026
ತಾಲೂಕು ಸುದ್ದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಎ.15ರಂದು ಸ್ಥಳಾಂತರ ಗೊಂಡಿತು.
ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ.ವಿ. ಅವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ಶ್ರೀಮತಿ ರತ್ನಾವತಿ, ಪ್ರಶಾಂತ ಕುಮಾರ್, ಹರಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್‌, ಮುಖ್ಯ ಪಶು ವೈದ್ಯಾಧಿಕಾರಿ ಡಾ/ ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿ ಗಳಾದ ಶ್ರೀಮತಿ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣ ರವರು ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್ ರವರು ವಂದಿಸಿದರು.
ಸೌಲಭ್ಯಗಳು:
ಸಹಕಾರಿ ಸಂಘದಲ್ಲಿ ಇ- ಸ್ಟಾಂಪಿಂಗ್, ಕಲರ್ ಝರಾಕ್ಸ್, ಝರಾಕ್ಸ್, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ ಎಂದು ಅಧ್ಯಕ್ಷ .ಕೆ. ಜಯಕೀರ್ತಿ ಜೈನ್ ರವರು ತಿಳಿಸಿದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!