25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.

ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್‌ ಅವರು ‘ಮಮತೆಯ ಬಂಧನ’ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾ‌ರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ದ್ವಾರಕೀಶ್‌ ಚಿತ್ರ ಬ್ಯಾನರ್ ಅಡಿಯಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!