25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya
error: Content is protected !!