23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ.

ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಬಲಿ ಉತ್ಸವ,ಕಲಶಾಭಿಷೇಕ, ವಸಂತ ಕಟ್ಟೆ ಪೂಜೆ,ಅಶ್ವಥ ಕಟ್ಟೆ ಸಮರ್ಪಣೆ, ಹರಿನಾಮ‌ ಸಂಕೀರ್ತನೆ, ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ ಮತ್ತು ದೇವರ ಭೇಟಿ,ರಥ ಪೂಜೆ, ಮಹಾಪೂಜೆ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಬಿ‌ ಶೀತಲ್ ಪಡಿವಾಲ್ ರವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆಯಿತು.

ಮನೋರಂಜನಾ ಕಾರ್ಯಕ್ರಮಗಳು: ಜಾತ್ರ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಶ್ರೀ ಪಂಚಲಿಂಗೇಶ್ವರ ಹವ್ಯಾಸಿ ಯಕ್ಷಗಾನ ತರಭೇತಿ ಕೇಂದ್ರದ ಮಕ್ಕಳಿಂದ ಗಿರಿಜಾ ಕಲ್ಯಾಣ ಯಕ್ಷಗಾನ, ಅರೆಹೊಳೆ ಪ್ರತಿಷ್ಠಾನ ಮಂಗಳೂರು ಕುಂದಾಪುರ ತಂಡದವರಿಂದ ಸಾಂಸ್ಕೃತಿಕ ವೈಭವ, ಕೊಡಿಯಲ್ ಬೈಲ್ ರಚಿಸಿ, ನಿರ್ದೇಶನದ ಮೈತಿದಿ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya
error: Content is protected !!