ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಲಾಯಿಲ : ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.14 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.

ಈ ಸಂದರ್ಭದಲ್ಲಿ ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ, ರಾಜೇಶ್ ಶೆಟ್ಟಿ ನವಶಕ್ತಿ, ಸುಮಂತ್ ಕುಮಾರ್ ಜೈ.ನ್
ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Comment

error: Content is protected !!