23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ತಾತ್ಕಾಲಿಕ ಬಸ್ ಚಾಲಕ ವಿನಯ (ಶಶಿಧರ ) ಗೌಡ (58 ವರ್ಷ) ಹೃದಯಾಘಾತದಿಂದ ನಿಧನರಾದ ಘಟನೆ ಎ.15ರಂದು ನಡೆದಿದೆ.

ಇವರು ವಾಣಿ ಶಿಕ್ಷಣ ಸಂಸ್ಥೆಗಳ ಶಾಲಾ ಮಕ್ಕಳ ಬಸ್ ನಲ್ಲಿ ತಾತ್ಕಾಲಿಕ ಚಾಲಕರಾಗಿ ಕೆಲವು ವರ್ಷಗಳಿಂದ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರು. ಮಂಗಳೂರು ಬೆಸೆಂಟ್ ಕಾಲೇಜ್‌ನಲ್ಲಿ ಹತ್ತನೇ ತರಗತಿ ಮಕ್ಕಳ ಪ್ರಶ್ನೆ ಪರೀಕ್ಷೆ ಮೌಲ್ಯಮಾಪನ ಮಾಡಲು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮಂಗಳೂರಿಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದರು.
ಮಧ್ಯಾಹ್ನ ಊಟ ಮುಗಿದ ನಂತರ ಬಸ್ ನಲ್ಲಿ ವಿಶ್ರಾಂತಿಗಾಗಿ ಮಲಗಿದ್ದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು. ಸಂಜೆ ಶಿಕ್ಷಕರು ಬಂದು ಬಸ್ ಹತ್ತಿ ನೋಡಿದಾಗ ಮಲಗಿದ್ದ ಸ್ಥಿತಿಯಲ್ಲಿದ್ದರು.ನಂತರ ಶಿಕ್ಷಕರು ಅವರನ್ನು ಎಬ್ಬಿಸುವಾಗ ಚಾಲಕ ವಿನಯ (ಶಶಿಧರ) ಗೌಡ ಮೃತ ಪಟ್ಟಿರುವುದನ್ನು ಗಮನಿಸಿ ಪಕ್ಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿದಾಗ ಚಾಲಕ ಮೃತಪಟ್ಟಿರುವುದಾಗಿ ಧೃಡ ಪಡಿಸಿದರು.

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಬೆಳ್ತಂಗಡಿಗೆ ರಾತ್ರಿ ತರಲಾಯಿತು.
ಈ ಸಂದರ್ಭದಲ್ಲಿ ವಿಷಯ ತಿಳಿದ ತಕ್ಷಣ ವಾಣಿ ಶಿಕ್ಷಣ ಸಂಸ್ಥೆಗಳ ಸಮಿತಿ ಪದಾಧಿಕಾರಿಗಳು, ಉಪನ್ಯಾಸಕರು,ಶಿಕ್ಷಕರು ಮಂಗಳೂರಿಗೆ ತೆರಳಿ ಎಲ್ಲಾ ರೀತಿಯ ಸಹಕರ ನೀಡಿ ಮೃತ ದೇಹವನ್ನು ಬೆಳ್ತಂಗಡಿಗೆ ತಂದು ಕುಟುಂಬದ ಸದಸ್ಯರಿಗೆ ನೀಡುವ ಮೂಲಕ ಸಹಕರಿಸಿದ್ದರು.

ಇವರು ವೇಣೂರು ನಿವಾಸಿಯಾಗಿದ್ದು, ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya
error: Content is protected !!