24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

ಶಿರ್ಲಾಲು: ಬದುಕಿನುದ್ದಕ್ಕೂ ಪರಿಶುದ್ಧ ಮನಸ್ಸು ಪಡೆಯುವ ಏಕೈಕ ಮಾರ್ಗ ಭಜನೆ. ಭಜನೆಯಿಂದ ದೈವತ್ವ ಮತ್ತು ಉತ್ತಮ ಸಂಸ್ಕಾರ ಜಾಗೃತವಾಗುತ್ತದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ತಿಳಿಸಿದರು.

ಅವರು ಎ.14 ರಂದು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಭಜನಾ ಕಮ್ಮಟೋತ್ಸವ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪಾಂಗಾಲ್ಪಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಯವರು ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಿ ಬೆಳ್ಳಿಹಬ್ಬ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಸನ್ಮಾನ: ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಸುಭಾಶ್ ಅರ್ವ,ಭಜನಾ ತರಬೇತುದಾರ ವಿ.ಹರೀಶ್ ನೆರಿಯರವರನ್ನು ಸನ್ಮಾನಿಸಲಾಯಿತು. ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಹಲವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಪ್ರಗತಿಪರ ಕೃಷಿಕರಾದ ಎಂ.ಗಂಗಾಧರ ಮಿತ್ತಮಾರ್ , ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಪೂಜಾರಿ, ಶಿರ್ಲಾಲು ಸಿಎ ಬ್ಯಾಂಕ್ ನಿವೃತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಶೆಟ್ಟಿ ನೊಚ್ಚ, ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ,ದೇವಸ್ಥಾನದ ಪ್ರಧಾನ ಆರ್ಚಕ ಸೂರ್ಯನಾರಾಯಣ ರಾವ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಆನಂದ ಎಸ್.ಎನ್ ರಥಬೀದಿ ಉಜಿರೆ,ಪ್ರಮೋದ್ ಕುಮಾರ್ ಇಂದ್ರಪ್ರಸ್ಥ,
ದೇವಸ್ಥಾನದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್.ಜೆ,ಶ್ರೀ ದೇವಿ ಮಹಿಳಾ ಕೇಂದ್ರದ ಅಧ್ಯಕ್ಷೆ ವಿಜಯ,ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸದಾಶಿವ ಶಿವಗಿರಿ, ದೇವಸ್ಥಾನದ ಉಪಾಧ್ಯಕ್ಷ ಶೇಖರ,ಕೋಶಾಧಿಕಾರಿ ಸುರೇಂದ್ರ ಕುಮಾರ್,ಜೊತೆ ಕಾರ್ಯದರ್ಶಿ ಪ್ರಶಾಂತ್ ಮಡೆಮಾರ್,ಶ್ರೀ ದೇವಿ ಮಹಿಳಾ ಕೇಂದ್ರದ ಪ್ರ‌ಕಾರ್ಯದರ್ಶಿ ಪದ್ಮಾವತಿ ಮಡೆಮಾರ್,ಭಜನಾ ಸಂಚಾಲಕ ಪ್ರಸಾದ್ ನಲ್ಲಾರುಗುತ್ತು,ಸಂಚಾಲಕಿ ಕಮಲಾಕ್ಷಿ ಎಸ್.ಎನ್ ರಾವ್,ಸಂಘಟನಾ ಕಾರ್ಯದರ್ಶಿ ಶ್ರವಣ್ ದೆರೊಟ್ಟು ಉಪಸ್ಥಿತರಿದ್ದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya
error: Content is protected !!