April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ತಾತ್ಕಾಲಿಕ ಬಸ್ ಚಾಲಕ ವಿನಯ (ಶಶಿಧರ ) ಗೌಡ (58 ವರ್ಷ) ಹೃದಯಾಘಾತದಿಂದ ನಿಧನರಾದ ಘಟನೆ ಎ.15ರಂದು ನಡೆದಿದೆ.

ಇವರು ವಾಣಿ ಶಿಕ್ಷಣ ಸಂಸ್ಥೆಗಳ ಶಾಲಾ ಮಕ್ಕಳ ಬಸ್ ನಲ್ಲಿ ತಾತ್ಕಾಲಿಕ ಚಾಲಕರಾಗಿ ಕೆಲವು ವರ್ಷಗಳಿಂದ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರು. ಮಂಗಳೂರು ಬೆಸೆಂಟ್ ಕಾಲೇಜ್‌ನಲ್ಲಿ ಹತ್ತನೇ ತರಗತಿ ಮಕ್ಕಳ ಪ್ರಶ್ನೆ ಪರೀಕ್ಷೆ ಮೌಲ್ಯಮಾಪನ ಮಾಡಲು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮಂಗಳೂರಿಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದರು.
ಮಧ್ಯಾಹ್ನ ಊಟ ಮುಗಿದ ನಂತರ ಬಸ್ ನಲ್ಲಿ ವಿಶ್ರಾಂತಿಗಾಗಿ ಮಲಗಿದ್ದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು. ಸಂಜೆ ಶಿಕ್ಷಕರು ಬಂದು ಬಸ್ ಹತ್ತಿ ನೋಡಿದಾಗ ಮಲಗಿದ್ದ ಸ್ಥಿತಿಯಲ್ಲಿದ್ದರು.ನಂತರ ಶಿಕ್ಷಕರು ಅವರನ್ನು ಎಬ್ಬಿಸುವಾಗ ಚಾಲಕ ವಿನಯ (ಶಶಿಧರ) ಗೌಡ ಮೃತ ಪಟ್ಟಿರುವುದನ್ನು ಗಮನಿಸಿ ಪಕ್ಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿದಾಗ ಚಾಲಕ ಮೃತಪಟ್ಟಿರುವುದಾಗಿ ಧೃಡ ಪಡಿಸಿದರು.

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಬೆಳ್ತಂಗಡಿಗೆ ರಾತ್ರಿ ತರಲಾಯಿತು.
ಈ ಸಂದರ್ಭದಲ್ಲಿ ವಿಷಯ ತಿಳಿದ ತಕ್ಷಣ ವಾಣಿ ಶಿಕ್ಷಣ ಸಂಸ್ಥೆಗಳ ಸಮಿತಿ ಪದಾಧಿಕಾರಿಗಳು, ಉಪನ್ಯಾಸಕರು,ಶಿಕ್ಷಕರು ಮಂಗಳೂರಿಗೆ ತೆರಳಿ ಎಲ್ಲಾ ರೀತಿಯ ಸಹಕರ ನೀಡಿ ಮೃತ ದೇಹವನ್ನು ಬೆಳ್ತಂಗಡಿಗೆ ತಂದು ಕುಟುಂಬದ ಸದಸ್ಯರಿಗೆ ನೀಡುವ ಮೂಲಕ ಸಹಕರಿಸಿದ್ದರು.

ಇವರು ವೇಣೂರು ನಿವಾಸಿಯಾಗಿದ್ದು, ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya
error: Content is protected !!