July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

ಶಿರ್ಲಾಲು: ಬದುಕಿನುದ್ದಕ್ಕೂ ಪರಿಶುದ್ಧ ಮನಸ್ಸು ಪಡೆಯುವ ಏಕೈಕ ಮಾರ್ಗ ಭಜನೆ. ಭಜನೆಯಿಂದ ದೈವತ್ವ ಮತ್ತು ಉತ್ತಮ ಸಂಸ್ಕಾರ ಜಾಗೃತವಾಗುತ್ತದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ತಿಳಿಸಿದರು.

ಅವರು ಎ.14 ರಂದು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಭಜನಾ ಕಮ್ಮಟೋತ್ಸವ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪಾಂಗಾಲ್ಪಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಯವರು ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಿ ಬೆಳ್ಳಿಹಬ್ಬ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಸನ್ಮಾನ: ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಸುಭಾಶ್ ಅರ್ವ,ಭಜನಾ ತರಬೇತುದಾರ ವಿ.ಹರೀಶ್ ನೆರಿಯರವರನ್ನು ಸನ್ಮಾನಿಸಲಾಯಿತು. ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಹಲವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಪ್ರಗತಿಪರ ಕೃಷಿಕರಾದ ಎಂ.ಗಂಗಾಧರ ಮಿತ್ತಮಾರ್ , ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಪೂಜಾರಿ, ಶಿರ್ಲಾಲು ಸಿಎ ಬ್ಯಾಂಕ್ ನಿವೃತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಶೆಟ್ಟಿ ನೊಚ್ಚ, ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ,ದೇವಸ್ಥಾನದ ಪ್ರಧಾನ ಆರ್ಚಕ ಸೂರ್ಯನಾರಾಯಣ ರಾವ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಆನಂದ ಎಸ್.ಎನ್ ರಥಬೀದಿ ಉಜಿರೆ,ಪ್ರಮೋದ್ ಕುಮಾರ್ ಇಂದ್ರಪ್ರಸ್ಥ,
ದೇವಸ್ಥಾನದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್.ಜೆ,ಶ್ರೀ ದೇವಿ ಮಹಿಳಾ ಕೇಂದ್ರದ ಅಧ್ಯಕ್ಷೆ ವಿಜಯ,ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸದಾಶಿವ ಶಿವಗಿರಿ, ದೇವಸ್ಥಾನದ ಉಪಾಧ್ಯಕ್ಷ ಶೇಖರ,ಕೋಶಾಧಿಕಾರಿ ಸುರೇಂದ್ರ ಕುಮಾರ್,ಜೊತೆ ಕಾರ್ಯದರ್ಶಿ ಪ್ರಶಾಂತ್ ಮಡೆಮಾರ್,ಶ್ರೀ ದೇವಿ ಮಹಿಳಾ ಕೇಂದ್ರದ ಪ್ರ‌ಕಾರ್ಯದರ್ಶಿ ಪದ್ಮಾವತಿ ಮಡೆಮಾರ್,ಭಜನಾ ಸಂಚಾಲಕ ಪ್ರಸಾದ್ ನಲ್ಲಾರುಗುತ್ತು,ಸಂಚಾಲಕಿ ಕಮಲಾಕ್ಷಿ ಎಸ್.ಎನ್ ರಾವ್,ಸಂಘಟನಾ ಕಾರ್ಯದರ್ಶಿ ಶ್ರವಣ್ ದೆರೊಟ್ಟು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!