25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ.

ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಬಲಿ ಉತ್ಸವ,ಕಲಶಾಭಿಷೇಕ, ವಸಂತ ಕಟ್ಟೆ ಪೂಜೆ,ಅಶ್ವಥ ಕಟ್ಟೆ ಸಮರ್ಪಣೆ, ಹರಿನಾಮ‌ ಸಂಕೀರ್ತನೆ, ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ ಮತ್ತು ದೇವರ ಭೇಟಿ,ರಥ ಪೂಜೆ, ಮಹಾಪೂಜೆ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಬಿ‌ ಶೀತಲ್ ಪಡಿವಾಲ್ ರವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆಯಿತು.

ಮನೋರಂಜನಾ ಕಾರ್ಯಕ್ರಮಗಳು: ಜಾತ್ರ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಶ್ರೀ ಪಂಚಲಿಂಗೇಶ್ವರ ಹವ್ಯಾಸಿ ಯಕ್ಷಗಾನ ತರಭೇತಿ ಕೇಂದ್ರದ ಮಕ್ಕಳಿಂದ ಗಿರಿಜಾ ಕಲ್ಯಾಣ ಯಕ್ಷಗಾನ, ಅರೆಹೊಳೆ ಪ್ರತಿಷ್ಠಾನ ಮಂಗಳೂರು ಕುಂದಾಪುರ ತಂಡದವರಿಂದ ಸಾಂಸ್ಕೃತಿಕ ವೈಭವ, ಕೊಡಿಯಲ್ ಬೈಲ್ ರಚಿಸಿ, ನಿರ್ದೇಶನದ ಮೈತಿದಿ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
error: Content is protected !!