23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ತಾತ್ಕಾಲಿಕ ಬಸ್ ಚಾಲಕ ವಿನಯ (ಶಶಿಧರ ) ಗೌಡ (58 ವರ್ಷ) ಹೃದಯಾಘಾತದಿಂದ ನಿಧನರಾದ ಘಟನೆ ಎ.15ರಂದು ನಡೆದಿದೆ.

ಇವರು ವಾಣಿ ಶಿಕ್ಷಣ ಸಂಸ್ಥೆಗಳ ಶಾಲಾ ಮಕ್ಕಳ ಬಸ್ ನಲ್ಲಿ ತಾತ್ಕಾಲಿಕ ಚಾಲಕರಾಗಿ ಕೆಲವು ವರ್ಷಗಳಿಂದ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರು. ಮಂಗಳೂರು ಬೆಸೆಂಟ್ ಕಾಲೇಜ್‌ನಲ್ಲಿ ಹತ್ತನೇ ತರಗತಿ ಮಕ್ಕಳ ಪ್ರಶ್ನೆ ಪರೀಕ್ಷೆ ಮೌಲ್ಯಮಾಪನ ಮಾಡಲು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮಂಗಳೂರಿಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದರು.
ಮಧ್ಯಾಹ್ನ ಊಟ ಮುಗಿದ ನಂತರ ಬಸ್ ನಲ್ಲಿ ವಿಶ್ರಾಂತಿಗಾಗಿ ಮಲಗಿದ್ದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು. ಸಂಜೆ ಶಿಕ್ಷಕರು ಬಂದು ಬಸ್ ಹತ್ತಿ ನೋಡಿದಾಗ ಮಲಗಿದ್ದ ಸ್ಥಿತಿಯಲ್ಲಿದ್ದರು.ನಂತರ ಶಿಕ್ಷಕರು ಅವರನ್ನು ಎಬ್ಬಿಸುವಾಗ ಚಾಲಕ ವಿನಯ (ಶಶಿಧರ) ಗೌಡ ಮೃತ ಪಟ್ಟಿರುವುದನ್ನು ಗಮನಿಸಿ ಪಕ್ಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿದಾಗ ಚಾಲಕ ಮೃತಪಟ್ಟಿರುವುದಾಗಿ ಧೃಡ ಪಡಿಸಿದರು.

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಬೆಳ್ತಂಗಡಿಗೆ ರಾತ್ರಿ ತರಲಾಯಿತು.
ಈ ಸಂದರ್ಭದಲ್ಲಿ ವಿಷಯ ತಿಳಿದ ತಕ್ಷಣ ವಾಣಿ ಶಿಕ್ಷಣ ಸಂಸ್ಥೆಗಳ ಸಮಿತಿ ಪದಾಧಿಕಾರಿಗಳು, ಉಪನ್ಯಾಸಕರು,ಶಿಕ್ಷಕರು ಮಂಗಳೂರಿಗೆ ತೆರಳಿ ಎಲ್ಲಾ ರೀತಿಯ ಸಹಕರ ನೀಡಿ ಮೃತ ದೇಹವನ್ನು ಬೆಳ್ತಂಗಡಿಗೆ ತಂದು ಕುಟುಂಬದ ಸದಸ್ಯರಿಗೆ ನೀಡುವ ಮೂಲಕ ಸಹಕರಿಸಿದ್ದರು.

ಇವರು ವೇಣೂರು ನಿವಾಸಿಯಾಗಿದ್ದು, ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya
error: Content is protected !!