23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ : ಹಿರಿಯ ವಿದ್ಯಾರ್ಥಿಯಾಗಿ ಮತ್ತೆ ಕಲಿತ ಕಾಲೇಜಿನತ್ತ ಬರುವಾಗ ಅಭಿಮಾನ ಹೆಚ್ಚುತ್ತದೆ. ಒಂದು ಸಣ್ಣ ಬೀಜವಾಗಿ ಸಂಸ್ಥೆಗೆ ಹೊಕ್ಕ ನಾವು ಇಂದು ಸಮಾಜಕ್ಕೆ ನೆರಳು ನೀಡುವ ಮರವಾಗಿ ಹೊರ ಹೋಗಿದ್ದೇವೆ. ಇದಕ್ಕೆ ನಾವು ಎಂದಿಗೂ ಎಸ್.ಡಿ.ಎಂ. ಸಂಸ್ಥೆಗೆ ಚಿರಋಣಿಯಾಗಿದ್ದೇವೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಕಾರ್ಯಕ್ರಮದ ಮುಖ್ಯ ಅತಿಥಿ ಕುಮಾರಿ ದೇವಿಕಾ ಹೇಳಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಜರುಗಿದ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ದರ್ಪಣ’ ಕಾರ್ಯಕ್ರಮವನ್ನು ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನಮ್ಮ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ ಡಾ. ಅರ್ಷಿಯಾ ಇವರು ಉದ್ಘಾಟಿಸಿ ಅನುಭವಗಳು ಕಹಿಯಾಗಿರಲಿ ಅಥವಾ ಸಿಹಿಯಾಗಿರಲಿ ಆದರೆ ನೆನಪುಗಳು ಮಾತ್ರ ಸಿಹಿಯಾಗಿರುತ್ತದೆ. ನಾವು ಎಂದಿಗೂ ಜೀವನದಲ್ಲಿ ಆಶಾವಾದಿಗಳಾಗಿರಬೇಕು. ಧನಾತ್ಮಕವಾಗಿ ಯೋಚಿಸಬೇಕು ಹಾಗೂ ಜೀವನದ ಸಾಧನೆಗೆ ಕನಸಿನ ಅಗತ್ಯವಿದೆ ಎಂದು ತಿಳಿಸಿದರು.


ಬಿ.ಎಡ್. ಎಂಬುದು ಅದ್ಭುತವಾದ ಪಯಣ ನಾವೆಲ್ಲಾ ಕೂಡುಕೊಳ್ಳುವುದರಿಂದ ಮಾತ್ರ ಒಂದು ಸಂಘಟನೆ ಅಭಿವೃದ್ಧಿಯಾಗುತ್ತದೆ. ಶಿಕ್ಷಕರು ಜವಾಬ್ದಾರಿಯುತವಾಗಿ ಹಾಗೂ ಜಾಗರೂಕತೆಯಿಂದ ಶಿಕ್ಷಣ ಸಂಸ್ಠೆಯಲ್ಲಿ ಸೇವೆ ಸಲ್ಲಿಸುವುದು ಅನಿವಾರ್ಯವಾಗಿದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಧನುಷ್ ಕೆ ಪಿ ಅಭಿಪ್ರಾಯ ವ್ಯಕ್ತಪಡಿಸಿದರು.


ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಮತ್ತೆ ಬಂದಾಗ ಸಂತೋಷವಾಗುತ್ತದೆ. ಕಾಲೇಜಿನ ಪ್ರತಿಯೊಂದು ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳ ಬೆಂಬಲಬೇಕು ಹಾಗೂ ಇದರಿಂದ ಕಾಲೇಜಿನ ನೆನಪುಗಳು ಮರುಕಳಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಪ್ರಸ್ತಾವಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿಗಳಾದ ಶೀತಲ್ ಸ್ವಾಗತಿಸಿ. ಪವಿತ್ರ ವಂದಿಸಿ, ಮಮತಾ ನಿರೂಪಿಸಿದರು.

Related posts

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!