25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ರುಕ್ಮ ಮೋಗೇರ(50 ವರ್ಷ) ಎಂದು ಗುರುತಿಸಲಾಗಿದೆ.

ರುಕ್ಮ ಮೋಗೇರ ಅವರು ತನ್ನ ಮಕ್ಕಳಾದ ಉಪೇಂದ್ರ ಮತ್ತು ನಾಗೇಶ್ ರೊಂದಿಗೆ ಗೊಬ್ಬರ ಲೋಡ್ ಮಾಡಲೆಂದು ಜಯೇಶ್ ಎಂಬವರ ಪಿಕಪ್ ವಾಹನದಲ್ಲಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ನಿಲ್ಲಿಸಿ ಅದರಲ್ಲಿದ್ದ ರುಕ್ಮ ಮೋಗೇರ ಹಾಗೂ ಮಕ್ಕಳಿಬ್ಬರು ಪಿಕಪ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ‌ ಪಿಕಪ್ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಒಮ್ಮೆಲೇ ಹಿಂದಕ್ಕೆ ಚಲಾಯಿಸಿದ ವೇಳೆ ರಸ್ತೆಯ ಬದಿಯಲ್ಲಿ ನಿಂತಿದ್ದ ರುಕ್ಮ ಮೋಗೇರ ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದು ಅವರು ಗಂಭೀರ ಗಾಯಗೊಂಡಿದ್ದು. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಯ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ನೋಣಮ್ಮ, ಮಕ್ಕಳಾದ ಉಪೇಂದ್ರ, ಹರೀಶ, ಹರೀಣಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.

Related posts

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya
error: Content is protected !!