23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ : ಹಿರಿಯ ವಿದ್ಯಾರ್ಥಿಯಾಗಿ ಮತ್ತೆ ಕಲಿತ ಕಾಲೇಜಿನತ್ತ ಬರುವಾಗ ಅಭಿಮಾನ ಹೆಚ್ಚುತ್ತದೆ. ಒಂದು ಸಣ್ಣ ಬೀಜವಾಗಿ ಸಂಸ್ಥೆಗೆ ಹೊಕ್ಕ ನಾವು ಇಂದು ಸಮಾಜಕ್ಕೆ ನೆರಳು ನೀಡುವ ಮರವಾಗಿ ಹೊರ ಹೋಗಿದ್ದೇವೆ. ಇದಕ್ಕೆ ನಾವು ಎಂದಿಗೂ ಎಸ್.ಡಿ.ಎಂ. ಸಂಸ್ಥೆಗೆ ಚಿರಋಣಿಯಾಗಿದ್ದೇವೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಕಾರ್ಯಕ್ರಮದ ಮುಖ್ಯ ಅತಿಥಿ ಕುಮಾರಿ ದೇವಿಕಾ ಹೇಳಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಜರುಗಿದ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ದರ್ಪಣ’ ಕಾರ್ಯಕ್ರಮವನ್ನು ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನಮ್ಮ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ ಡಾ. ಅರ್ಷಿಯಾ ಇವರು ಉದ್ಘಾಟಿಸಿ ಅನುಭವಗಳು ಕಹಿಯಾಗಿರಲಿ ಅಥವಾ ಸಿಹಿಯಾಗಿರಲಿ ಆದರೆ ನೆನಪುಗಳು ಮಾತ್ರ ಸಿಹಿಯಾಗಿರುತ್ತದೆ. ನಾವು ಎಂದಿಗೂ ಜೀವನದಲ್ಲಿ ಆಶಾವಾದಿಗಳಾಗಿರಬೇಕು. ಧನಾತ್ಮಕವಾಗಿ ಯೋಚಿಸಬೇಕು ಹಾಗೂ ಜೀವನದ ಸಾಧನೆಗೆ ಕನಸಿನ ಅಗತ್ಯವಿದೆ ಎಂದು ತಿಳಿಸಿದರು.


ಬಿ.ಎಡ್. ಎಂಬುದು ಅದ್ಭುತವಾದ ಪಯಣ ನಾವೆಲ್ಲಾ ಕೂಡುಕೊಳ್ಳುವುದರಿಂದ ಮಾತ್ರ ಒಂದು ಸಂಘಟನೆ ಅಭಿವೃದ್ಧಿಯಾಗುತ್ತದೆ. ಶಿಕ್ಷಕರು ಜವಾಬ್ದಾರಿಯುತವಾಗಿ ಹಾಗೂ ಜಾಗರೂಕತೆಯಿಂದ ಶಿಕ್ಷಣ ಸಂಸ್ಠೆಯಲ್ಲಿ ಸೇವೆ ಸಲ್ಲಿಸುವುದು ಅನಿವಾರ್ಯವಾಗಿದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಧನುಷ್ ಕೆ ಪಿ ಅಭಿಪ್ರಾಯ ವ್ಯಕ್ತಪಡಿಸಿದರು.


ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಮತ್ತೆ ಬಂದಾಗ ಸಂತೋಷವಾಗುತ್ತದೆ. ಕಾಲೇಜಿನ ಪ್ರತಿಯೊಂದು ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳ ಬೆಂಬಲಬೇಕು ಹಾಗೂ ಇದರಿಂದ ಕಾಲೇಜಿನ ನೆನಪುಗಳು ಮರುಕಳಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಪ್ರಸ್ತಾವಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿಗಳಾದ ಶೀತಲ್ ಸ್ವಾಗತಿಸಿ. ಪವಿತ್ರ ವಂದಿಸಿ, ಮಮತಾ ನಿರೂಪಿಸಿದರು.

Related posts

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!