25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದ
ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ಎ.17ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಡಿ. ಹರ್ಷೇಂದ್ರ ಕುಮಾರ್‌ ಅವರು ವಹಿಸಿ, ಚಂದು ನಾಯ್ಕ ಅವರನ್ನು ಅಭಿಮಾನ ಪೂರ್ವಕ ಸನ್ಮಾನಿಸಿ ಮಾತನಾಡಿದರು.

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ವಿದ್ವಾನ್ ಡಾ. ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು.
ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಶುಭಾಶಂಸನೆ ಮಾಡಿದರು. ಆಡಳಿತಾಧಿಕಾರಿ ಜಗನ್ನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ , ಡಾ. ಬಿ. ಶಿವಪ್ರಸಾದ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಸುಜಾತ ಸನ್ಮಾನ ಪತ್ರ ವಾಚಿಸಿದರು. ಕು.ಭಾಷಿಣಿ ಮತ್ತು ಬಳಗದವರು ಪ್ರಾಥ೯ನೆ ಹಾಡಿದರು.
ಅನನ್ಯ ಬೆಳ್ತಂಗಡಿ ಕಾಯ೯ಕ್ರಮ ನಿರೂಪಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿದೇಶ೯ಕ ಡಾ.ಐ.ಶಶಿಕಾಂತ್ ಜೈನ್ ವಂದಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya
error: Content is protected !!