25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದ
ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ಎ.17ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಡಿ. ಹರ್ಷೇಂದ್ರ ಕುಮಾರ್‌ ಅವರು ವಹಿಸಿ, ಚಂದು ನಾಯ್ಕ ಅವರನ್ನು ಅಭಿಮಾನ ಪೂರ್ವಕ ಸನ್ಮಾನಿಸಿ ಮಾತನಾಡಿದರು.

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ವಿದ್ವಾನ್ ಡಾ. ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು.
ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಶುಭಾಶಂಸನೆ ಮಾಡಿದರು. ಆಡಳಿತಾಧಿಕಾರಿ ಜಗನ್ನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ , ಡಾ. ಬಿ. ಶಿವಪ್ರಸಾದ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಸುಜಾತ ಸನ್ಮಾನ ಪತ್ರ ವಾಚಿಸಿದರು. ಕು.ಭಾಷಿಣಿ ಮತ್ತು ಬಳಗದವರು ಪ್ರಾಥ೯ನೆ ಹಾಡಿದರು.
ಅನನ್ಯ ಬೆಳ್ತಂಗಡಿ ಕಾಯ೯ಕ್ರಮ ನಿರೂಪಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿದೇಶ೯ಕ ಡಾ.ಐ.ಶಶಿಕಾಂತ್ ಜೈನ್ ವಂದಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!