25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಹೆಚ್ ಕೆ ಇವರು ವಹಿಸಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ನೆರವೇರಿಸಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಪ್ರಜ್ಞೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಾಧ್ಯ ಕೇವಲ ತರಗತಿ ಬೋಧನೆ ಅಷ್ಟೇ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಾಗುವುದಿಲ್ಲ ಎಂದು ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ| ರೋನಾಲ್ಡ್ ಪ್ರವೀಣ್ ಕೊರೆಯ ಪ್ರಸ್ತಾವನೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ| ಪದ್ಮನಾಭ ಕೆ, ಸಾಂಸ್ಕೃತಿಕ ಸಂಘದ ಸಂಯೋಜಕರಾದ ಪ್ರೊಫೆಸರ್ ಸುರೇಶ್ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ| ಕವಿತಾ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಆಶಾಲತಾ ಉಪಸ್ಥಿತರಿದ್ದರು. ಮಾನವಿಕ ಸಂಘದ ಅಧ್ಯಕ್ಷ ಸ್ವಸ್ತಿಕ್ ಸ್ವಾಗತಿಸಿದರು. ಕುಮಾರಿ ಪುಷ್ಪ ವಂದಿಸಿದರು. ಕುಮಾರಿ ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!