25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಹೆಚ್ ಕೆ ಇವರು ವಹಿಸಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ನೆರವೇರಿಸಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಪ್ರಜ್ಞೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಾಧ್ಯ ಕೇವಲ ತರಗತಿ ಬೋಧನೆ ಅಷ್ಟೇ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಾಗುವುದಿಲ್ಲ ಎಂದು ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ| ರೋನಾಲ್ಡ್ ಪ್ರವೀಣ್ ಕೊರೆಯ ಪ್ರಸ್ತಾವನೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ| ಪದ್ಮನಾಭ ಕೆ, ಸಾಂಸ್ಕೃತಿಕ ಸಂಘದ ಸಂಯೋಜಕರಾದ ಪ್ರೊಫೆಸರ್ ಸುರೇಶ್ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ| ಕವಿತಾ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಆಶಾಲತಾ ಉಪಸ್ಥಿತರಿದ್ದರು. ಮಾನವಿಕ ಸಂಘದ ಅಧ್ಯಕ್ಷ ಸ್ವಸ್ತಿಕ್ ಸ್ವಾಗತಿಸಿದರು. ಕುಮಾರಿ ಪುಷ್ಪ ವಂದಿಸಿದರು. ಕುಮಾರಿ ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!