37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ರುಕ್ಮ ಮೋಗೇರ(50 ವರ್ಷ) ಎಂದು ಗುರುತಿಸಲಾಗಿದೆ.

ರುಕ್ಮ ಮೋಗೇರ ಅವರು ತನ್ನ ಮಕ್ಕಳಾದ ಉಪೇಂದ್ರ ಮತ್ತು ನಾಗೇಶ್ ರೊಂದಿಗೆ ಗೊಬ್ಬರ ಲೋಡ್ ಮಾಡಲೆಂದು ಜಯೇಶ್ ಎಂಬವರ ಪಿಕಪ್ ವಾಹನದಲ್ಲಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ನಿಲ್ಲಿಸಿ ಅದರಲ್ಲಿದ್ದ ರುಕ್ಮ ಮೋಗೇರ ಹಾಗೂ ಮಕ್ಕಳಿಬ್ಬರು ಪಿಕಪ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ‌ ಪಿಕಪ್ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಒಮ್ಮೆಲೇ ಹಿಂದಕ್ಕೆ ಚಲಾಯಿಸಿದ ವೇಳೆ ರಸ್ತೆಯ ಬದಿಯಲ್ಲಿ ನಿಂತಿದ್ದ ರುಕ್ಮ ಮೋಗೇರ ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದು ಅವರು ಗಂಭೀರ ಗಾಯಗೊಂಡಿದ್ದು. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಯ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ನೋಣಮ್ಮ, ಮಕ್ಕಳಾದ ಉಪೇಂದ್ರ, ಹರೀಶ, ಹರೀಣಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.

Related posts

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!