23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ರುಕ್ಮ ಮೋಗೇರ(50 ವರ್ಷ) ಎಂದು ಗುರುತಿಸಲಾಗಿದೆ.

ರುಕ್ಮ ಮೋಗೇರ ಅವರು ತನ್ನ ಮಕ್ಕಳಾದ ಉಪೇಂದ್ರ ಮತ್ತು ನಾಗೇಶ್ ರೊಂದಿಗೆ ಗೊಬ್ಬರ ಲೋಡ್ ಮಾಡಲೆಂದು ಜಯೇಶ್ ಎಂಬವರ ಪಿಕಪ್ ವಾಹನದಲ್ಲಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ನಿಲ್ಲಿಸಿ ಅದರಲ್ಲಿದ್ದ ರುಕ್ಮ ಮೋಗೇರ ಹಾಗೂ ಮಕ್ಕಳಿಬ್ಬರು ಪಿಕಪ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ‌ ಪಿಕಪ್ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಒಮ್ಮೆಲೇ ಹಿಂದಕ್ಕೆ ಚಲಾಯಿಸಿದ ವೇಳೆ ರಸ್ತೆಯ ಬದಿಯಲ್ಲಿ ನಿಂತಿದ್ದ ರುಕ್ಮ ಮೋಗೇರ ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದು ಅವರು ಗಂಭೀರ ಗಾಯಗೊಂಡಿದ್ದು. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಯ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ನೋಣಮ್ಮ, ಮಕ್ಕಳಾದ ಉಪೇಂದ್ರ, ಹರೀಶ, ಹರೀಣಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.

Related posts

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!