22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ರುಕ್ಮ ಮೋಗೇರ(50 ವರ್ಷ) ಎಂದು ಗುರುತಿಸಲಾಗಿದೆ.

ರುಕ್ಮ ಮೋಗೇರ ಅವರು ತನ್ನ ಮಕ್ಕಳಾದ ಉಪೇಂದ್ರ ಮತ್ತು ನಾಗೇಶ್ ರೊಂದಿಗೆ ಗೊಬ್ಬರ ಲೋಡ್ ಮಾಡಲೆಂದು ಜಯೇಶ್ ಎಂಬವರ ಪಿಕಪ್ ವಾಹನದಲ್ಲಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ನಿಲ್ಲಿಸಿ ಅದರಲ್ಲಿದ್ದ ರುಕ್ಮ ಮೋಗೇರ ಹಾಗೂ ಮಕ್ಕಳಿಬ್ಬರು ಪಿಕಪ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ‌ ಪಿಕಪ್ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಒಮ್ಮೆಲೇ ಹಿಂದಕ್ಕೆ ಚಲಾಯಿಸಿದ ವೇಳೆ ರಸ್ತೆಯ ಬದಿಯಲ್ಲಿ ನಿಂತಿದ್ದ ರುಕ್ಮ ಮೋಗೇರ ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದು ಅವರು ಗಂಭೀರ ಗಾಯಗೊಂಡಿದ್ದು. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಯ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ನೋಣಮ್ಮ, ಮಕ್ಕಳಾದ ಉಪೇಂದ್ರ, ಹರೀಶ, ಹರೀಣಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya
error: Content is protected !!