25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ : ಹಿರಿಯ ವಿದ್ಯಾರ್ಥಿಯಾಗಿ ಮತ್ತೆ ಕಲಿತ ಕಾಲೇಜಿನತ್ತ ಬರುವಾಗ ಅಭಿಮಾನ ಹೆಚ್ಚುತ್ತದೆ. ಒಂದು ಸಣ್ಣ ಬೀಜವಾಗಿ ಸಂಸ್ಥೆಗೆ ಹೊಕ್ಕ ನಾವು ಇಂದು ಸಮಾಜಕ್ಕೆ ನೆರಳು ನೀಡುವ ಮರವಾಗಿ ಹೊರ ಹೋಗಿದ್ದೇವೆ. ಇದಕ್ಕೆ ನಾವು ಎಂದಿಗೂ ಎಸ್.ಡಿ.ಎಂ. ಸಂಸ್ಥೆಗೆ ಚಿರಋಣಿಯಾಗಿದ್ದೇವೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಕಾರ್ಯಕ್ರಮದ ಮುಖ್ಯ ಅತಿಥಿ ಕುಮಾರಿ ದೇವಿಕಾ ಹೇಳಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಜರುಗಿದ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ದರ್ಪಣ’ ಕಾರ್ಯಕ್ರಮವನ್ನು ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನಮ್ಮ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ ಡಾ. ಅರ್ಷಿಯಾ ಇವರು ಉದ್ಘಾಟಿಸಿ ಅನುಭವಗಳು ಕಹಿಯಾಗಿರಲಿ ಅಥವಾ ಸಿಹಿಯಾಗಿರಲಿ ಆದರೆ ನೆನಪುಗಳು ಮಾತ್ರ ಸಿಹಿಯಾಗಿರುತ್ತದೆ. ನಾವು ಎಂದಿಗೂ ಜೀವನದಲ್ಲಿ ಆಶಾವಾದಿಗಳಾಗಿರಬೇಕು. ಧನಾತ್ಮಕವಾಗಿ ಯೋಚಿಸಬೇಕು ಹಾಗೂ ಜೀವನದ ಸಾಧನೆಗೆ ಕನಸಿನ ಅಗತ್ಯವಿದೆ ಎಂದು ತಿಳಿಸಿದರು.


ಬಿ.ಎಡ್. ಎಂಬುದು ಅದ್ಭುತವಾದ ಪಯಣ ನಾವೆಲ್ಲಾ ಕೂಡುಕೊಳ್ಳುವುದರಿಂದ ಮಾತ್ರ ಒಂದು ಸಂಘಟನೆ ಅಭಿವೃದ್ಧಿಯಾಗುತ್ತದೆ. ಶಿಕ್ಷಕರು ಜವಾಬ್ದಾರಿಯುತವಾಗಿ ಹಾಗೂ ಜಾಗರೂಕತೆಯಿಂದ ಶಿಕ್ಷಣ ಸಂಸ್ಠೆಯಲ್ಲಿ ಸೇವೆ ಸಲ್ಲಿಸುವುದು ಅನಿವಾರ್ಯವಾಗಿದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಧನುಷ್ ಕೆ ಪಿ ಅಭಿಪ್ರಾಯ ವ್ಯಕ್ತಪಡಿಸಿದರು.


ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಮತ್ತೆ ಬಂದಾಗ ಸಂತೋಷವಾಗುತ್ತದೆ. ಕಾಲೇಜಿನ ಪ್ರತಿಯೊಂದು ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳ ಬೆಂಬಲಬೇಕು ಹಾಗೂ ಇದರಿಂದ ಕಾಲೇಜಿನ ನೆನಪುಗಳು ಮರುಕಳಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಪ್ರಸ್ತಾವಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿಗಳಾದ ಶೀತಲ್ ಸ್ವಾಗತಿಸಿ. ಪವಿತ್ರ ವಂದಿಸಿ, ಮಮತಾ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
error: Content is protected !!