September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದ
ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ಎ.17ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಡಿ. ಹರ್ಷೇಂದ್ರ ಕುಮಾರ್‌ ಅವರು ವಹಿಸಿ, ಚಂದು ನಾಯ್ಕ ಅವರನ್ನು ಅಭಿಮಾನ ಪೂರ್ವಕ ಸನ್ಮಾನಿಸಿ ಮಾತನಾಡಿದರು.

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ವಿದ್ವಾನ್ ಡಾ. ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು.
ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಶುಭಾಶಂಸನೆ ಮಾಡಿದರು. ಆಡಳಿತಾಧಿಕಾರಿ ಜಗನ್ನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ , ಡಾ. ಬಿ. ಶಿವಪ್ರಸಾದ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಸುಜಾತ ಸನ್ಮಾನ ಪತ್ರ ವಾಚಿಸಿದರು. ಕು.ಭಾಷಿಣಿ ಮತ್ತು ಬಳಗದವರು ಪ್ರಾಥ೯ನೆ ಹಾಡಿದರು.
ಅನನ್ಯ ಬೆಳ್ತಂಗಡಿ ಕಾಯ೯ಕ್ರಮ ನಿರೂಪಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿದೇಶ೯ಕ ಡಾ.ಐ.ಶಶಿಕಾಂತ್ ಜೈನ್ ವಂದಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
error: Content is protected !!