ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ ಮಾಡಿದ್ದಾರೆ.


ಖಾಲಿದ್ ಪುಲಾಬೆಯವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಪಡ್ಡಂದಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಗೌರವಾದ್ಯಕ್ಷರಾಗಿ, ಜಮೀಯತುಲ್ ಫಲಾಹ್ ಬೆಳ್ತಂಗಡಿಯ ಉಪಾದ್ಯಕ್ಷರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ ತಾಲೂಕು ಸಂಯೋಜಕರಾಗಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

Leave a Comment

error: Content is protected !!