September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಹೆಚ್ ಕೆ ಇವರು ವಹಿಸಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ನೆರವೇರಿಸಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಪ್ರಜ್ಞೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಾಧ್ಯ ಕೇವಲ ತರಗತಿ ಬೋಧನೆ ಅಷ್ಟೇ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಾಗುವುದಿಲ್ಲ ಎಂದು ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ| ರೋನಾಲ್ಡ್ ಪ್ರವೀಣ್ ಕೊರೆಯ ಪ್ರಸ್ತಾವನೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ| ಪದ್ಮನಾಭ ಕೆ, ಸಾಂಸ್ಕೃತಿಕ ಸಂಘದ ಸಂಯೋಜಕರಾದ ಪ್ರೊಫೆಸರ್ ಸುರೇಶ್ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ| ಕವಿತಾ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಆಶಾಲತಾ ಉಪಸ್ಥಿತರಿದ್ದರು. ಮಾನವಿಕ ಸಂಘದ ಅಧ್ಯಕ್ಷ ಸ್ವಸ್ತಿಕ್ ಸ್ವಾಗತಿಸಿದರು. ಕುಮಾರಿ ಪುಷ್ಪ ವಂದಿಸಿದರು. ಕುಮಾರಿ ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!