July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!